- Advertisement -
- Advertisement -
ವಾರಾಣಸಿ: ಯುವಕರ ಗುಂಪೊಂದು ಜೀವ ರಕ್ಷಕ ಆಂಬುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡು ಸಿಕ್ಕಿಹಾಕಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.
ವಾರಾಣಸಿಯ ರಾಮನಗರ ಏರಿಯಾದ ನಿರ್ಜನ ಪ್ರದೇಶವೊಂದರಲ್ಲಿ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿರುವ ಆಂಬುಲೆನ್ಸ್ ತುಂಬಾ ಹೊತ್ತು ನಿಂತಿದ್ದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆಂಬುಲೆನ್ಸ್ ಬಳಿ ಹೋಗಿ ನೋಡಿದಾಗ ಅವರಿಗೆ ಶಾಕ್ ಆಗಿದೆ.
ಮೂವರು ಯುವಕರು ಮತ್ತು ಓರ್ವ ಯುವತಿ ಆಂಬುಲೆನ್ಸ್ ನೊಳಗೆ ಮಜಾ ಮಾಡುತ್ತಾ ಕುಳಿತಿದ್ದಾಗಿ ಹೇಳಲಾಗಿದೆ. ತಕ್ಷಣ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -