- Advertisement -
![]()
- Advertisement -
ಮಂಗಳೂರು: ನಗರದ ಹೊರವಲಯದ ಕುಪ್ಪೆಪದವು ನೋಣಾಲ್ ಎಂಬಲ್ಲಿ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತಗೊಂಡು ಕಾರ್ಮಿಕನೋರ್ವ ಮಣ್ಣಿನಡಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ .

ಮಣ್ಣಿನಡಿಯಲ್ಲಿ ಸಿಲುಕಿಕೊಂಡ ಕಾರ್ಮಿಕನನ್ನು ಕುಪ್ಪೆಪದವು ಅರಳ ನಿವಾಸಿ ರಾಜೇಶ್ (28) ಎಂದು ಗುರುತಿಸಲಾಗಿದೆ. ತಕ್ಷಣ ಸ್ಥಳೀಯರ ಸಮಯ ಪ್ರಜ್ಞೆಯಿಂದ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಸಣ್ಣಪುಟ್ಟ ಗಾಯಗಳಾದ ರಾಜೇಶ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸುವ ಮೊದಲೇ ಸಮಯಪ್ರಜ್ಞೆ ಮೆರೆದ ಸ್ಥಳೀಯರು ಕಾರ್ಮಿಕನನ್ನು ರಕ್ಷಿಸಿದ್ದಾರೆ..
- Advertisement -



