- Advertisement -
![]()
- Advertisement -
ವಿಜಯಪುರ : ಕರ್ನಾಟಕ ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮಹತ್ವಾಕಾಂಕ್ಷೆಯ ಯೋಜನೆಗೆ ಸೆಪ್ಟೆಂಬರ್ 5 ರಂದು ಚಾಲನೆ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಯೋಜನೆಯಿಂದ ರಾಜ್ಯದ ರೈತರ 18 ಲಕ್ಷ ಮಕ್ಕಳಿಗೆ ಲಾಭ ದೊರೆಯಲಿದೆ. ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ಆರ್ಥಿಕ ಹೊರೆ ಬೀಳಲಿದೆ ಎಂದರು.
ಸೆಪ್ಟೆಂಬರ್ 5 ರಂದು ಈ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಪಿಯುಸಿಯಿಂದ ಪಿಜಿ ವರೆಗೆ ಶಿಕ್ಷಣ ಪಡೆಯುತ್ತಿರುವ ಸುಮಾರು 18 ಲಕ್ಷ ರೈತರ ಮಕ್ಕಳಿಗೆ ಇದರ ಲಾಭ ದೊರೆಯಲಿದೆ ಎಂದು ತಿಳಿಸಿದ್ದಾರೆ.
- Advertisement -


