ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಬಿಜೆಪಿ ಕಛೇರಿಯಲ್ಲಿ ನಡೆದ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯ ಇವರ ಜನ್ಮದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಪ್ರಸ್ತುತ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್ ಸಿಂಹ ರವರಿಗೆ ಶಾಸಕರಾದ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ರವರು ಗೌರವ ಸಮರ್ಪಿಸಿದರು.
ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಗಣೇಶ್ ಗೌಡ ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಜಿಲ್ಲಾ ಭಾಜಪ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ್ ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಚೆನ್ನಕೇಶವ,ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿಜಯ ಆರಂಬೋಡಿ ಪ್ರಧಾನ ಕಾರ್ಯದರ್ಶಿ ಸವಿತಾ ಶೆಟ್ಟಿ ಮಂಡಲ ಉಪಾಧ್ಯಕ್ಷರಾದ ವಸಂತಿ ಮಚ್ಚಿನ ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮೋಹನ್ ಅಂಡಿಂಜೆ ಹಿಂದುಳಿದ ಮೋರ್ಚಾ ಅಧ್ಯಕ್ಷರಾದ ಪ್ರಭಾಕರ್ ಆಚಾರ್ಯ ಉಪಸ್ಥಿತರಿದ್ದರು.