Monday, June 30, 2025
Homeಅಪರಾಧಪಾತಕಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಎತ್ತಿ‌ಹಿಡಿದ ಹೈಕೊರ್ಟ್!

ಪಾತಕಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಎತ್ತಿ‌ಹಿಡಿದ ಹೈಕೊರ್ಟ್!

spot_img
- Advertisement -
- Advertisement -

ಬೆಂಗಳೂರು: ವಿಕೃತಕಾಮಿ‌ ಹಾಗೂ ಸರಣಿ ಹಂತಕ ಉಮೇಶ್ ರೆಡ್ಡಿಗೆ ಕರ್ನಾಟಕ ಹೈ ಕೋರ್ಟ್ ಗಲ್ಲು ಶಿಕ್ಷೆಯ ತೀರ್ಪನ್ನು ಇಂದು ಪ್ರಕಟ ಮಾಡಿದೆ.

ನ್ಯಾ. ಪ್ರದೀಪ್​ ಸಿಂಗ್​ ಯೆರೂರ್ ನೇತೃತ್ವದ ನ್ಯಾಯಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಬೆಂಗಳೂರಿನ ಜಯಶ್ರೀ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆಯನ್ನು ವಿಧಿಸಿತ್ತು. ಸೆಷನ್​ ಕೋರ್ಟ್​ನ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಇದಾದ ಬಳಿಕ ಕ್ಷಮಾದಾನ ಕೋರಿ ಉಮೇಶ್​ ರೆಡ್ಡಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದನು.

2013ರಲ್ಲಿ ರಾಷ್ಟ್ರಪತಿ ಈ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಇದಾದ ಬಳಿಕ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಬದಲಾಯಿಸುವಂತೆ ಕೋರಿ ಉಮೇಶ್​ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದ. ಇದೇ ವಿಚಾರವಾಗಿ ಇಂದು ಹೈಕೋರ್ಟ್ ತನ್ನ ನಿರ್ಧಾರ ಪ್ರಕಟಿಸಿದೆ.

- Advertisement -
spot_img

Latest News

error: Content is protected !!