- Advertisement -
- Advertisement -
ಬಂಟ್ವಾಳ : ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಘಟನೆ ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಕೆ.ಪಿ.ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಗೊಳಗಾದವರು. ಈ ಬಗ್ಗೆ ಅವರ ಪತ್ನಿ ಅಪ್ಸ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನಲೆಯಲ್ಲಿ ಬೇರೆ ವ್ಯವಹಾರ ಮಾಡುತ್ತೇನೆ ಎಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಆ ಬಳಿಕ ಮನೆಗೆ ಹಿಂದಿರುಗಿದ್ದರು. ಈ ನಡುವೆ ಪತ್ನಿ ಮನೆಯಲ್ಲಿ ಇಲ್ಲದ ವೇಳೆ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕರೆದುಕೊಂಡು ಕಾರಿನಲ್ಲಿ ಕುಳ್ಳಿರಿಸಿ ಅಪಹರಿಸಿಕೊಂಡು ಹೋಗಲಾಗಿದೆ ಎಂದು ಅಪ್ಸ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -