Monday, June 30, 2025
Homeಕರಾವಳಿಉಡುಪಿ : ಆರ್.ಡಿ.ಪಿ.ಆರ್ ವತಿಯಿಂದ ಮಟ್ಟು ಕಡಲ ಕಿನಾರೆಯ ಸ್ವಚ್ಚತಾ ಕಾರ್ಯಕ್ರಮ!

ಉಡುಪಿ : ಆರ್.ಡಿ.ಪಿ.ಆರ್ ವತಿಯಿಂದ ಮಟ್ಟು ಕಡಲ ಕಿನಾರೆಯ ಸ್ವಚ್ಚತಾ ಕಾರ್ಯಕ್ರಮ!

spot_img
- Advertisement -
- Advertisement -

ಉಡುಪಿ : ಪಂಚಾಯತ್ ನೌಕರರ ಶ್ರೇಯೋಭಿವೃಧ್ಧಿ ಸಂಘ ಆರ್.ಡಿ.ಪಿ.ಆರ್ ನ ವತಿಯಿಂದ ಕ್ಲೀನ್ ಇಂಡಿಯಾ ಅಭಿಯಾನದಲ್ಲಿ ಮಟ್ಟು ಕಡಲ ಕಿನಾರೆಯ ಸ್ವಚ್ಚತಾ ಕಾರ್ಯಕ್ರಮವನ್ನು ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃಧ್ಧಿ ಸಂಘ (ಆರ್.ಡಿ.ಪಿ.ಆರ್) (ರಿ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ, ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಚ ಭಾರತ್ ಮಿಷನ್ ಉಡುಪಿ, ಕೋಟೆ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾಯಿತು.

ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯದ ದುಷ್ಪರಿಣಾಮವಾಗಿ ಜಾನುವಾರುಗಳು, ಜಲಚರಗಳ ಜೊತೆಗೆ ಮಾನವ ಸಂಕೂಲವೂ ಸಂಕಷ್ಟಕ್ಕೀಡಾಗುತ್ತಿದೆ, ಪ್ರಕೃತಿಯ ವಿನಾಶವೂ ಸಂಭವಿಸುತ್ತಿದೆ, ಸಾರ್ವಜನಿಕರು ಸ್ವಯಂ ಸ್ಪೂರ್ತಿಯಿಂದ ಸ್ವಚ್ಚತೆಯ ಬಗ್ಗೆ ಜಾಗೃತರಾಗುವುದರೊಂದಿಗೆ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಗೆ ಸಹಕರಿಸಬೇಕು, ಈ ಬಗ್ಗೆ ಪಂಚಾಯತ್ ರಾಜ್ ವ್ಯವಸ್ಥೆಯ ತಳಮಟ್ಟದ ಪಂಚಾಯತ್ ನೌಕರರ ಶ್ರೇಯೋಭಿವೃಧ್ಧಿ ಸಂಘ ಸ್ವಚ್ಚತೆಯ ಕುರಿತು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ವಿವಿಧ ಸಂಘಟನೆಗಳನ್ನು ಒಗ್ಗೋಡಿಸಿಕೊಂಡು ಜಾಗೃತಿ ಮೂಡಿಸುವ ಕಾರ್ಯವು ಶ್ಲಾಘನಿಯವಾಗಿದೆ ಎಂದು ಲಾಲಾಜಿ ಆರ್ ಮೆಂಡನ್ ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿಯವರಾದ ಶ್ರೀನಿವಾಸ್ ರಾವ್, ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಿಶೋರ್ ಕುಮಾರ್, ರೋಟರಿ ಮಾಜಿ ಜಿಲ್ಲಾ ಗರ್ವನರ್ ಮತ್ತು ಉದ್ಯಮಿ ಶ್ರೀ ಕೆ. ಸತ್ಯೆಂದ್ರ ಪೈ, ಎನ್.ಆರ್.ಎಲ್.ಎಮ್ ಜಿಲ್ಲಾ ಸಂಯೋಜಕರು ಶ್ರೀ ಪಾಂಡುರಂಗ, ಕರ್ನಾಟಕ ರಾಜ್ಯ ಪಂಚಾಯತ್ ನೌಕರರ ಶ್ರೇಯೋಭಿವೃಧ್ಧಿ ಸಂಘದ ರಾಜ್ಯ ಕಾರ್ಯದರ್ಶಿ ಶ್ರೀ ಪದ್ಮನಾಭ ಆರ್ ಕುಲಾಲ್, ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಶೃತಿ ಕಾಂಚನ್, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃಧ್ಧಿ ಸಂಘ (ಆರ್.ಡಿ.ಪಿ.ಆರ್) (ರಿ) ಉಡುಪಿ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕೆ, ತೆಂಕನಿಡಿಯೂರು, ಉಪಾಧ್ಯಕ್ಷರಾದ ಶ್ರೀ ಹೇಮಚಂದ್ರ ನಂದಳಿಕೆ, ಉಡುಪಿ ತಾಲೂಕು ಸಮಿತಿಯ ಅಧ್ಯಕ್ಷರಾದ ಶ್ರೀ ಅರವಿಂದ ಎಸ್ ರಾವ್ ಕುಕ್ಕೆಹಳ್ಳಿ, ಕಾರ್ಕಳ ತಾಲೂಕು ಸಮಿತಿ ಅಧ್ಯಕ್ಷರಾದ ಶ್ರೀ ಸೈಫ್ಫುಲ್ಲ್ ನಲ್ಲೂರು, ಪ್ರಧಾನ ಕಾರ್ಯದರ್ಶಿ ಯವರಾದ ಶ್ರೀ ಅಭಿಷೇಕ್ ಅಲೆವೂರು, ಖಚಾಂಚಿಯಾದ ಶ್ರೀ ಸಚಿನ್ ಮಣಿಪುರ, ಕೋಟೆ ಗ್ರಾಮ ಪಂಚಾಯತ್ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಹಾಗೂ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಪಂಚಾಯತ್ ರಾಜ್ ವ್ಯವಸ್ಥೆಯ ತಳಮಟ್ಟದ ನೌಕರರಾದ ಪಂಚಾಯತ್ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!