- Advertisement -
![]()
- Advertisement -
ಬಂಟ್ವಾಳ: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೊಮ್ಮಗಳು ಬಂಟ್ವಾಳ ವೀರಕಂಬ ಮೂಲದ ಹವ್ಯಕ ಬ್ರಾಹ್ಮಣ ಯುವಕನನ್ನು ವರಿಸಿದ್ದು ಬೆಂಗಳೂರು ಅರಮನೆ ಸಭಾಂಗಣದಲ್ಲಿ ಅದ್ದೂರಿ ವಿವಾಹ ನಡೆದಿದೆ.


ವೀರಕಂಬ ಗ್ರಾಮದ ಗಿಳ್ಕಿಂಜದ ಎ.ಟಿ ಹರಿಶಂಕರ – ವಿಜಯಲಕ್ಷ್ಮಿ ಅವರ ಪುತ್ರ ಪಾಣಿನಿ ಭಟ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರಿ ಜಯಶ್ರೀ ಹಾಗೂ ರಾಧಾಕೃಷ್ಣ ಅವರ ಪುತ್ರಿ ಪ್ರಾರ್ಥನ ಅವರನ್ನು ಮದುವೆಯಾಗಿದ್ದಾರೆ .



ಪ್ರಾರ್ಥನಾ ಮತ್ತು ಪಾಣಿನಿ ಭಟ್ ಇಬ್ಬರೂ ಕೂಡಾ ನ್ಯಾಯವಾದಿಗಳಾಗಿದ್ದು, ಸಂಸ್ಥೆಯೊಂದರಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಎರಡೂ ಕುಟು೦ಬಗಳ ಸಮೃತಿಯಿ೦ದ ಅದ್ಧೂರಿಯಿಂದ ಮದುವೆ ಕಾರ್ಯಜರುಗಿದೆ.ಸಮಾರಂಭದಲ್ಲಿ ರಾಷ್ಟ್ರ ರಾಜ್ಯದ ಗಣ್ಯರು ಪಾಲ್ಗೊಂಡಿದ್ದರು.
- Advertisement -


