- Advertisement -
- Advertisement -
ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ ನಟ ಅಪ್ಪು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಶಿವರಾಜ್ಕುಮಾರ್ ಅವರ ಬಹುನಿರೀಕ್ಷಿತ ಸಿನಿಮಾ ‘ಭಜರಂಗಿ’ ಇಂದು ಅದ್ದೂರಿಯಾಗಿ ತೆರೆಕಂಡಿದ್ದು, ಅಣ್ಣನ ಸಿನಿಮಾವನ್ನ ಕಣ್ತುಂಬಿಕೊಳ್ಳಲೆಂದು ಥಿಯೇಟರ್ಗೆ ಹೋಗಲು ಪುನೀತ್ ಪ್ಲಾನ್ ಮಾಡಿದ್ದರಂತೆ. ಅಷ್ಟರಲ್ಲಿ ಹೃದಯಾಘಾತ ಸಂಭವಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಆಸ್ಪತ್ರೆಗೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಬಂದಿದ್ದಾರೆ. ಪುನೀತ್ ಅವರ ಮನೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
- Advertisement -