Monday, May 20, 2024
Homeಕರಾವಳಿಪೆರಿಯಶಾಂತಿ : ಏಕಾಏಕಿ ಪ್ರತ್ಯಕ್ಷವಾದ ಕಾಡಾನೆ ; ದಿಕ್ಕಾಪಾಲಾಗಿ ಓಡಿದ ಬೈಕ್ ಸವಾರರು !!!

ಪೆರಿಯಶಾಂತಿ : ಏಕಾಏಕಿ ಪ್ರತ್ಯಕ್ಷವಾದ ಕಾಡಾನೆ ; ದಿಕ್ಕಾಪಾಲಾಗಿ ಓಡಿದ ಬೈಕ್ ಸವಾರರು !!!

spot_img
- Advertisement -
- Advertisement -

ಪೆರಿಯಶಾಂತಿ : ಏಕಾಏಕಿಯಾಗಿ ಇಚಿಲಂಪಾಡಿಯ ರಸ್ತೆ ಬದಿಯಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದ್ದು, ಬೈಕ್ ಸವಾರರಿಬ್ಬರು ಪಾರಾದ ಘಟನೆ ನಡೆದಿದೆ.

ಕುಟ್ರುಪ್ಪಾಡಿ ಗ್ರಾಮದ ಬಜೆತ್ತಡ್ಕ ನಿವಾಸಿ ಧರ್ಮಪಾಲ ಹಾಗೂ ರಮೇಶ್ ಎಂಬವರು ಕೊಕ್ಕಡದ ಸಂಬಂಧಿಕರ ಮನೆಗೆಂದು ಇಚಿಲಂಪಾಡಿ ಮೂಲಕ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ವೇಳೆ ಕಾಡಾನೆ ರಸ್ತೆ ದಾಟಿದ್ದು, ದಿಕ್ಕು ತೋಚದ ಬೈಕ್ ಸವಾರರು ಹಠಾತ್ ಬ್ರೇಕ್ ಹಾಕಿದ್ದಾರೆ. ಇದರಿಂದಾಗಿ ಬೈಕ್ ಕಾಡಾನೆಯ ಪಕ್ಕವೇ ಮಗುಚಿ ಬಿದ್ದಿದ್ದು, ಸವಾರ ಮತ್ತು ಸಹ ಸವಾರ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದಾರೆ. ಅಲ್ಲಿಂದ ಕೂಡಲೇ ಎದ್ದು ಬೈಕ್ ಬಿಟ್ಟು ಅರ್ಧ ಕಿ.ಮೀ ದೂರ ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ಕಂಡು ಅಲ್ಲಿ ಜನ ನೆರೆದಿದ್ದು, ಬೈಕನ್ನು ಎತ್ತಿ ಸಹಕರಿಸಿದ್ದಾರೆ. ಘಟನೆಯಲ್ಲಿ ಓರ್ವ ಸವಾರನ ಕಾಲಿಗೆ ಸಣ್ಣ ಗಾಯವಾಗಿದ್ದು, ಸಹ ಸವಾರನ ಕೈಗೆ ಪರಚಿದ ಗಾಯವಾಗಿದೆ ಎಂದು ಹೇಳಲಾಗುತ್ತಿದೆ.

- Advertisement -
spot_img

Latest News

error: Content is protected !!