- Advertisement -
- Advertisement -
ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ 41ನೇ ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2021 ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

41 ನೇ ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2021 ಕ್ರೀಡಾಕೂಟವನ್ನು ಯಶ್ ಪಾಲ್ ಸುವರ್ಣ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಕುಂದಾಪುರ ಸಹನ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಶ್ರೀ ಸುರೇಂದ್ರ ಶೆಟ್ಟಿ , ಗಿರಿಜಾ ಹೆಲ್ತ್ ಕೇರ್ ಉಡುಪಿ ಆಡಳಿತ ನಿರ್ದೇಶಕರಾದ ಶ್ರೀ ರವೀಂದ್ರ ಶೆಟ್ಟಿ , ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ರೋಷನ್ ಕುಮಾರ್ ಶೆಟ್ಟಿ , ಕ್ರೀಡಾ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದ ಶ್ರೀ ವಿಠಲ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು .
- Advertisement -