Sunday, June 7, 2026
Homeಕರಾವಳಿಉಡುಪಿಉಡುಪಿ: ಭಾರತದ ವಿರುದ್ಧ ಚೀನಾ ಗೆಲುವು ಸಾಧಿಸುವುದು ಅಸಾಧ್ಯ: ಅಣ್ಣಾಮಲೈ

ಉಡುಪಿ: ಭಾರತದ ವಿರುದ್ಧ ಚೀನಾ ಗೆಲುವು ಸಾಧಿಸುವುದು ಅಸಾಧ್ಯ: ಅಣ್ಣಾಮಲೈ

- Advertisement -
- Advertisement -

ಉಡುಪಿ: “ಭಾರತದೊಂದಿಗೆ ಹೋರಾಡುವ ಸಾಮರ್ಥ್ಯ ಪಾಕಿಸ್ತಾನಕ್ಕಿಲ್ಲ. ಚೀನಾ ಕೂಡ ಭಾರತದ ವಿರುದ್ಧ ಯುದ್ಧ ಗೆಲ್ಲಲು ಸಾಧ್ಯವಿಲ್ಲ. ಚೀನಾದ ಕಮ್ಯುನಿಸ್ಟ್ ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ಈ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಏಕೆಂದರೆ ಕಳೆದ ಕೆಲವು ವರ್ಷಗಳಿಂದ ಭಾರತವು ಅಭಿವೃದ್ಧಿ ಹೊಂದುತ್ತಿದೆ” ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.

ಪರ್ಯಾಯ ಅದಮಾರು ಮಠದ ವಿಶ್ವಾರ್ಪಣಂ ಕಾರ್ಯಕ್ರಮದ 17ನೇ ದಿನದ ಕಾರ್ಯಕ್ರಮಗಳ ಸಮಾರೋಪ ಕಾರ್ಯಕ್ರಮದ ಕುರಿತು ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದ ಸಂಸ್ಕೃತಿಯನ್ನು ಉಳಿಸಲು ಬದಲಾವಣೆಗಳನ್ನು ತರಲಾಗುತ್ತಿದೆ ಎಂದು ಹೇಳಿದರು. ಮಹಿಳೆಯರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ಮೂಲಕ ಗೌರವಯುತವಾದ ಅಸ್ತಿತ್ವವನ್ನು ನೀಡಬೇಕು ಎಂದರು. ಈ ಉದ್ದೇಶವನ್ನು ಸಾಧಿಸಲು, ಕೇಂದ್ರ ಸರ್ಕಾರವು ಅವರ ವಿವಾಹದ ವಯಸ್ಸನ್ನು 21 ಕ್ಕೆ ಹೆಚ್ಚಿಸಲು ಮುಂದಾಗಿದೆ ಎಂದು ಅವರು ವಿವರಿಸಿದರು.

ತುಳು ಭಾಷೆಯನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಕರಾವಳಿ ಕರ್ನಾಟಕದ ಮಠಾಧೀಶರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸರ್ ಮನವಿ ಮಾಡಿದರು.

ಶಿರಸಿ ಸೋಂದಾ ಸ್ವರ್ಣವಲ್ಲೀ ಮಠದ ಮುಖ್ಯಸ್ಥರಾದ ಶ್ರೀ ಗಂಗಾಧರೇಶ್ವರ ಸರಸ್ವತಿ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯಾೇಂದ್ರ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

- Advertisement -

Latest News

error: Content is protected !!