- Advertisement -
- Advertisement -
ಮಂಗಳೂರು: ಮೊಬೈಲ್ ಕಳವುಗೈದು ಪರಾರಿಯಾಗುತ್ತಿದ್ದ ವೇಳೆ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಮಂತ್ (20) ಎಂದು ಗುರುತಿಸಲಾಗಿದೆ.
ವಿಚಾರಣೆ ನಡೆಸಿದ ಸಂದರ್ಭ ತಂಡದಲ್ಲಿ 4-5 ಮಂದಿ ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿದುಬಂದಿದೆ. ನೆಹರೂ ಮೈದಾನಲ್ಲಿ ಮಲಗಿದ್ದ ವ್ಯಕ್ತಿಯ ಮೊಬೈಲ್ ಕದ್ದು ಪರಾರಿಗೆ ಯತ್ನಿಸುತ್ತಿದ್ದ ನೀರುಮಾರ್ಗದ ಹರೀಶ್ ಪೂಜಾರಿ (32) ಎಂಬಾತನನ್ನು ಬೆನ್ನಟ್ಟಿದ್ದು ಆತನನ್ನು ವಶಕ್ಕೆ ಪಡೆದಿದ್ದರು, ಈ ವೇಳೆ ಮತ್ತೋರ್ವ ಆರೋಪಿ ರಾಜೇಶ್ ಪರಾರಿಯಾಗಿದ್ದಾನೆ.
ಕಳ್ಳರನ್ನು ಯಶಸ್ವಿಯಾಗಿ ಹಿಡಿದ ಪೊಲೀಸ್ ಅಧಿಕಾರಿ ವರುಣ್ ಆಳ್ವ ಅವರನ್ನು ಪುರಸ್ಕರಿಸಿ ಸನ್ಮಾನಿಸುತ್ತೇವೆ ಎಂದು ಆಯುಕ್ತರು ತಿಳಿಸಿದ್ದಾರೆ.
- Advertisement -