- Advertisement -
- Advertisement -
ಬೆಳ್ತಂಗಡಿ : ಪಡಂಗಡಿ ಗ್ರಾಮದ ಬದ್ಯಾರ್ ನಿವಾಸಿ ವಿಲಿಯಂ ಹಾಗೂ ಅನಿತಾ ಡಿಸಿಲ್ವ ಅವರ ಮಗಳು ಏಂಜಲ್ ಅನುಷಾ ಡಿಸಿಲ್ವ (11) ಇಂದು ಬೆಳಗ್ಗೆ ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಇಂದು ನಿಧನರಾದರು . ವಾರದ ಹಿಂದೆ ಏಕಾಏಕಿ ಅನಾರೋಗ್ಯಕ್ಕೀಡಾದ ಬಾಲಕಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅರಸಿನ ಕಾಮಾಲೆ ಕಾಯಿಲೆಯಿಂದ ಬಾಲಕಿಯ ಲಿವರ್ ಜರ್ಝರಿತಗೊಂಡಿದ್ದು , ಲಿವರ್ ಕಸಿ ಮಾಡಲು ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಾಲಕಿ ಏಂಜಲ್ ಅನುಷಾ ಡಿಸಿಲ್ವ ಬೆಳ್ತಂಗಡಿ ಚರ್ಚ್ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು , ಪಠ್ಯ ಹಾಗೂ ಪಠ್ಯತೇರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು.
- Advertisement -