- Advertisement -
![]()
- Advertisement -
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ ಸೋಮಶೇಖರ ಮತ್ತು ಕಾರ್ಯದರ್ಶಿ ಶ್ರೀ ಪ್ರಕಾಶ್ ಮತ್ತೀಹಳ್ಳಿ ಯವರು ನಾಳೆ ಕಾಸರಗೋಡಿಗೆ ಆಗಮಿಸಲಿದ್ದಾರೆ .
ನಾಳೆ ಬೆಳಗ್ಗೆ ಅವರು ಕಾಸರಗೋಡು ಜಿಲ್ಲಾಧಿಕಾರಿಯವರನ್ನು ಭೇಟಿಮಾಡಿ ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳ ಬಗ್ಗೆ ಚರ್ಚಿಸುವರು .ಆ ಬಳಿಕ ಮಧ್ಯಾಹ್ನ 12 ಗಂಟೆಗೆ ಎಡನೀರು ಮಠದ ಸಭಾಂಗಣದಲ್ಲಿ ನಡೆಯುವ ಸಮಾಲೋಚನೆ , ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಎಡನೀರಿನಲ್ಲಿ ನಡೆಯುವ ಈ ಸಂವಾದ ಕಾರ್ಯಕ್ರಮದಲ್ಲಿ ಕಾಸರಗೋಡಿನ ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು , ವಿದ್ಯಾರ್ಥಿಗಳು , ಯುವಮನಸ್ಸುಗಳು ಭಾಗವಹಿಸಬೇಕೆಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ .
- Advertisement -


