Monday, June 30, 2025
Homeತಾಜಾ ಸುದ್ದಿವಿಶಾಖಪಟ್ಟಣಂ ವಿಷಾನಿಲ ದುರಂತ; ಸುತ್ತಮುತ್ತಲಿನ 5 ಗ್ರಾಮಗಳ ಜನರ ಸ್ಥಳಾಂತರ

ವಿಶಾಖಪಟ್ಟಣಂ ವಿಷಾನಿಲ ದುರಂತ; ಸುತ್ತಮುತ್ತಲಿನ 5 ಗ್ರಾಮಗಳ ಜನರ ಸ್ಥಳಾಂತರ

spot_img
- Advertisement -
- Advertisement -

ವಿಶಾಖಪಟ್ಟಣಂ (ಮೇ 7): ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಎಲ್​ಜಿ ಪಾಲಿಮರ್ಸ್​ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಸೋರಿಕೆಯಾದ ಗ್ಯಾಸ್​ ಕಿಲೋಮೀಟರ್​ಗಟ್ಟಲೆ ವ್ಯಾಪಿಸುತ್ತಿರುವುದರಿಂದ ಹೆಚ್ಚಿನ ಅನಾಹುತವನ್ನು ತಪ್ಪಿಸಲು 5 ಗ್ರಾಮಗಳ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಿಂದ ಈಗಾಗಲೇ 8 ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 5,000ಕ್ಕೂ ಹೆಚ್ಚು ಜನರು ವಿಷಾನಿಲ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಎಲ್​ಜಿ ಪಾಲಿಮರ್ಸ್​ ಕಾರ್ಖಾನೆಯ ಸುತ್ತಮತ್ತಲೂ 5 ಕಿ.ಮೀ. ವ್ಯಾಪ್ತಿಯ 5 ಗ್ರಾಮಗಳನ್ನು ಸಂಪೂರ್ಣ ಖಾಲಿ ಮಾಡಿಸಲಾಗಿದೆ. ಇನ್ನೂ 2 ಗ್ರಾಮಗಳ ಜನರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ವಹಿಸಿ, ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟುವಂತೆ ಗೃಹ ಸಚಿವಾಲಯಕ್ಕೆ ಸೂಚಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ನಡೆದಿದೆ. ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಸುತ್ತಮುತ್ತಲಿನ ಮನೆಗಳಿಗೂ ವಿಷಾನಿಲ ಹರಡಿದೆ. ಇದರಿಂದ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಸಾಕಷ್ಟು ಜನರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ವಿಷಾನಿಲ ಸೇವನೆಯಿಂದ ಜನರು ರಸ್ತೆಗಳಲ್ಲಿ ಬಿದ್ದು ಹೊರಳಾಡುತ್ತಿದ್ದ ವಿಡಿಯೋಗಳು ಟ್ವಿಟ್ಟರ್​ನಲ್ಲಿ ಹರಿದಾಡುತ್ತಿವೆ. ಹತ್ತಾರು ಆಂಬುಲೆನ್ಸ್​ಗಳ ಮೂಲಕ ಅಸ್ವಸ್ಥಗೊಂಡಿದ್ದ ಜನರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಫ್ಯಾಕ್ಟರಿಯಿಂದ ಗ್ಯಾಸ್​ ಹರಡುತ್ತಲೇ ಇರುವುದರಿಂದ ಇಲ್ಲಿನ ಸುತ್ತಮುತ್ತಲಿನ 5 ಗ್ರಾಮಗಳ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

- Advertisement -
spot_img

Latest News

error: Content is protected !!