- Advertisement -
- Advertisement -
ಬೆಂಗಳೂರು: ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತ್ಯೋತ್ಸವ ಹಿನ್ನೆಲೆ ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. 115 ನೇ ಜಯಂತ್ಯೋತ್ಸವ ಹಿನ್ನೆಲೆ ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಬಂದಿದ್ದ 115 ಮಕ್ಕಳಿಗೆ ಶಿವಕುಮಾರ ಎಂದು ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.
ಇನ್ನು ತುಮಕೂರಿನ ಕ್ಯಾತ್ಸಂದ್ರದ ಮುಸ್ಲಿಂ ದಂಪತಿ ಶಾಹಿಸ್ತಾ ಮತ್ತು ಜಮೀರ್ ತಮ್ಮ ಮಗಳಿಗೆ ಶಿವಮಣಿ ಎಂದು ನಾಮಕರಣ ಮಾಡಿದ್ದಾರೆ.
- Advertisement -