- Advertisement -
- Advertisement -
ಉಡುಪಿ: ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಗಮಂಡಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಕುಂಜಿಬೆಟ್ಟಿನ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಯೋಜಿಸಿದ್ದ ನಾಗಮಂಡಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ನಾಗ ಪಾತ್ರಿಯಿಂದ ಪ್ರಸಾದ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು,
ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ವಿಶ್ವವಲ್ಲಭತೀರ್ಥ ಶ್ರೀಗಳು ಸೋಂದೆ ಸಂಸ್ಥಾನಮಠ, ಶಿರೂರಿನ ವೇದವರ್ಧನ ತೀರ್ಥ ಶ್ರೀಗಳು, ಸಚಿವರಾದ ವಿ ಸುನಿಲ್ ಕುಮಾರ್, ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಮೆಂಡನ್, ರಘುಪತಿ ಭಟ್ ಮತ್ತು ಇತರರು ಉಪಸ್ಥಿತರಿದ್ದರು.
- Advertisement -