- Advertisement -
- Advertisement -
ಬಾಗಲಕೋಟೆ: ಮುಖ್ಯಮಂತ್ರಿ ಬಸವರಾಾಜ ಬೊಮ್ಮಾಯಿ ಎಸಿ ಎಸ್ಟಿ ಸಮುದಾಯಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.ಬಾಗಲಕೋಟೆಯ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮಹತ್ವದ ಯೋಜನೆಯ ಬಗ್ಗೆ ತಿಳಿಸಿದ್ದಾರೆ. ಎಸ್ ಸಿ ಎಟಿ ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್ಗಳ ವಿದ್ಯುತ್ ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ ಸ್ರ್ತೀಶಕ್ತಿ ಅಭಿವೃದ್ಧಿಗೆ ಆಂಕರ್ ಬ್ಯಾಂಕ್, ಹಾಲು ಉತ್ಪಾದಕರಿಗೆ ನಂದಿನಿ ಕ್ಷೀರ ಬ್ಯಾಂಕ್, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲರ ಮಾಸಾಶನ ಹೆಚ್ಚಳದಂತಹ ಅನೇಕ ರೀತಿ ಅಭಿವೃದ್ಧಿಯ ಕಾರ್ಯನಿರ್ವಹಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಪರಿಶಿಷ್ಟ ಜಾತಿ/ಪಂಗಡದವರಿಗಾಗಿ 75 ಯೂನಿಟ್ ವಿದ್ಯುತ್ ಉಚಿತ ವಿತರಿಸುವ ಯೋಜನೆ ಹಾಕಿಕೊಂಡಿದ್ದೇವೆ ಎಂದಿದ್ದಾರೆ.
- Advertisement -