Monday, August 31, 2026
Homeಕರಾವಳಿನಿರಂತರ ಮಳೆ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ

ನಿರಂತರ ಮಳೆ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ

- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ಇಂದು ಭಾರೀ ಮಳೆ ಸಾದ್ಯತೆಯಲ್ಲಿ ಇಂದು ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.‌

ಇಂದು ಬೆಳಗ್ಗೆಯಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಒಂದು ದಿನ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!