Sunday, June 29, 2025
Homeಕರಾವಳಿಮಂಗಳೂರಿನಲ್ಲಿ ಹಿಜಾಬ್ ವಿವಾದ ಎಲ್ಲವೂ ಕಾಂಗ್ರೆಸ್ ಕುಮ್ಮಕ್ಕಿನಿಂದ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆರೋಪ

ಮಂಗಳೂರಿನಲ್ಲಿ ಹಿಜಾಬ್ ವಿವಾದ ಎಲ್ಲವೂ ಕಾಂಗ್ರೆಸ್ ಕುಮ್ಮಕ್ಕಿನಿಂದ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆರೋಪ

spot_img
- Advertisement -
- Advertisement -

ಧಾರವಾಡ: ಮಂಗಳೂರಿನಲ್ಲಿ ಮತ್ತೆ ಶುರುವಾಗಿರುವ ಹಿಜಾಬ್ ವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರ, ಪೊಲೀಸರು ಮತ್ತು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಧಾರವಾಡದಲ್ಲಿ‌ ಪ್ರತಿಕ್ರಿಯಿಸಿರುವ ಪ್ರಹ್ಲಾದ್ ಜೋಷಿ, ಬೇಕಿದ್ದರೆ ಸುಪ್ರಿಂ ಕೋರ್ಟ್‌ನಲ್ಲಿ ಹೋರಾಡಬಹುದು. ಹೈಕೋರ್ಟ್ ಆದೇಶ ಆಗಿರುವಾಗ ಅದನ್ನು ಪಾಲನೆ ಮಾಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಈ ರೀತಿಯಲ್ಲಿ ಕಾನೂನು, ಕೋರ್ಟ್ ಮತ್ತು ಸಂವಿಧಾನಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಕೇಂದ್ರ ಸಚಿವ ಜೋಷಿ, ಇದೆಲ್ಲವೂ ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

- Advertisement -
spot_img

Latest News

error: Content is protected !!