ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ರಕ್ಷಿತ್ ಶಿವರಾಂ ರವರಿಗೆ ಮಾಲಾಡಿ, ಸೋಣಂದೂರು ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನಾ ಕಾರ್ಯಕ್ರಮವು ಮಾಲಾಡಿ ಎಸ್.ಕೆ. ಎಸ್ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ರಾಜೀವ ಶೆಟ್ಟಿ ಎಡ್ತೂರು, ಮಾಜಿ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಬೇಬಿ ಸುವರ್ಣ, ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಮಹಾವೀರ ಬಲ್ಲಾಳ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾದ, ರಾಜಶೇಖರ್ ಶೆಟ್ಟಿ, ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಮೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಬೆನೆಡ್ಡಿಕ್ ಮಿರಂದ, ಉಮೇಶ್, ವಿದ್ಯಾ ಪಿ ಸಾಲಿಯಾನ್, ರುಬಿನಾ ಪಣಕಜೆ ಐಯಿರಿನ್ ಮೋರಸ್, ದಲಿತ ಸಂಘರ್ಷ ಸಮಿತಿಯ ಶಂಕರ್, ಬಾಬಿ, ಸುಕೇಶ್ಲ್, ಬ್ಲಾಕ್ ಕಾಂಗ್ರೆಸ್ ಜತೆ ಕಾರ್ಯದರ್ಶಿ ಹೈದರ ಅಲಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.