Saturday, August 29, 2026
Homeಕರಾವಳಿಉಡುಪಿಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ಹಣ ಸಾಗಾಟ : ರೈಲ್ವೇ ಪೊಲೀಸರಿಂದ ಆರೋಪಿ ಅರೆಸ್ಟ್

ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ಹಣ ಸಾಗಾಟ : ರೈಲ್ವೇ ಪೊಲೀಸರಿಂದ ಆರೋಪಿ ಅರೆಸ್ಟ್

- Advertisement -
- Advertisement -

ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲಾ ಹಣ ಸಾಗಾಟ ಮಾಡುತ್ತಿದ್ದ
ಆರೋಪಿಯನ್ನು ಬಂಧಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೇ ನಿಲ್ದಾಣದಲ್ಲಿ ದಾಳಿ ನಡೆಸಿದ ರೈಲ್ವೇ ಪೊಲೀಸರು ಎರಡು ಕೋಟಿ ರೂಪಾಯಿ ಹಣ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಎಕ್ಸ್ ಪ್ರೆಸ್ ರೈಲ್ವೇಯಲ್ಲಿ ಮುಂಬೈನಿಂದ ಮಂಗಳೂರಿಗೆ ಹವಾಲಾ ಹಣ ಸಾಗಾಟ ವೇಳೆ ದಾಳಿ ನಡೆಸಲಾಗಿದೆ.

ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಎಂಬ
ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು ಒಪ್ಪಿಸಿದ್ದಾರೆ.

- Advertisement -

Latest News

error: Content is protected !!