ಬಂಟ್ವಾಳ: ತಾಲೂಕಿನ ಸಾಲೆತ್ತೂರು ಗ್ರಾಮದ ಅಗರಿಯಲ್ಲಿ ನಡೆದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ತಂಡಗಳ ನಡುವಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತಂಡಗಳವರು ನೀಡಿದ ದೂರಿನಂತೆ ಹತ್ತೊಂಬತ್ತು ಮಂದಿಯ ವಿರುದ್ಧವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೈಕಿ ನಾಲ್ವರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕರಿಂಬಿನಾಡಿ ನಿವಾಸಿ ಆನಂದ ಬೆಳ್ಳಾಡ ರವರ ಪುತ್ರ ಚಂದ್ರಹಾಸ(27 ವ.)ರವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಪ್ರಶಾಂತ್, ತೇಜಸ್, ಗೀರಿಶ, ಗಣೇಶ್, ಶರತ್, ಧನು, ಮುನ್ನಾ, ಚೇತನ, ವಿನಿತ, ದಿನೇಶ್, ಶಶಿ ಕುಮಾರ್ ಸಹಿತ ಇತರ ಇರ್ವರ ವಿರುದ್ಧವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂ ರು ತಾಲೂಕು ಇಡ್ಯ ಗ್ರಾಮದ ಸುರತ್ಕಲ್ ಕೃಷ್ಣಾಪುರ ನಿವಾಸಿ ಕೃಷ್ಣ ಭಂಡಾರಿ ರವರ ಪುತ್ರ ಪ್ರಶಾಂತ್ ಅಲಿಯಾಸ್ ಪಚ್ಚು(30 ವ.) ರವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಂದ್ರಹಾಸ, ನಾಗೇಶ್, ದೇವದಾಸ ಸಹಿತ ಮೂವರ ವಿರುದ್ಧವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.