- Advertisement -
- Advertisement -
ವಿಟ್ಲ: ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ಜೂ.29 ರಂದು ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.
![](https://mahaxpress.com/wp-content/uploads/2022/06/ವಿಟ್ಲ-೨-913x1024.jpeg)
ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ.
![](https://mahaxpress.com/wp-content/uploads/2022/06/ವಿಟ್ಲ-೩-1024x576.jpeg)
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಪ್ರಕರಣದ ಸತ್ಯಾಂಶ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ..
- Advertisement -