- Advertisement -
- Advertisement -
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಚೂರಿ ಇರಿದು ಕೊಲೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮಹಮ್ಮದ್ ನೌಫಾಲ್ ಹಾಗೂ ಮಹಮ್ಮದ್ ನೌಶೀರ್ ಎಂಬವರು ಬಂಧಿತ ಆರೋಪಿಗಳು.
ಕೊಲೆಯಾದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ ಹಾಗೂ ಕೊಲೆ ಆರೋಪಿಗಳು ಸ್ನೇಹಿತರಾಗಿದ್ದು, ಹೋಟೆಲ್ ಮುಂದೆ ಹಾರ್ನ್ ಹಾಕಿದ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಜುಲೈ 4 ರಂದು ಮಧ್ಯ ರಾತ್ರಿ 1 ಗಂಟೆ ವೇಳೆಗೆ ತಲಪಾಡಿ ಹೋಟೆಲ್ ಒಂದರ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಚೂರಿಯಲ್ಲಿ ಇರಿದು ಕೊಲೆ ಮಾಡಿದ್ದರು. ಕೊಲೆ ಮಾಡುವ ಮುನ್ನ ಸ್ನೇಹಿತರು ಪರಸ್ಪರ ಹೊಡೆದಾಡಿಕೊಂಡಿದ್ದರು ಎನ್ನಲಾಗಿದೆ.
- Advertisement -