ಬೆಳ್ಳಾರೆ: ಇಂದು ಮೃತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ತಿಮರೋಡಿ ಮಹೇಶ್ ಶೆಟ್ಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿದ್ರು.
ಹತ್ಯೆ ಮಾಮೂಲಿ ಅಗಿದೆ, ಚುನಾವಣೆಗೆ ಎಂಟು ತಿಂಗಳು ಇದೆ. ವೋಟ್ ಹಾಕ್ಬೇಕಲ್ಲ ಅದಕ್ಕಂತಲೇ ಕೊಲೆ ಆಗುತ್ತದೆ. ಇದುವೇ ಕರಾವಳಿಯ ವೋಟ್ ಬ್ಯಾಂಕ್ ರಾಜಕೀಯ ಎಂದು ವಾಗ್ದಾಳಿ ನಡೆಸಿದರು
ಹಿಂದೂರಾಷ್ಟ್ರ ಕಟ್ಟಲು ಹೊರಟ ಬಿಜೆಪಿಯವರು ಮುತಾಲಿಕ್ ಗೆ ಬ್ಯಾನ್ ಮಾಡ್ತಾರೆ. ಭಯೋತ್ಪಾದಕರು ರಾಜ್ಯಾದ್ಯಂತ ತಿರುಗಾಡ್ತಾರೆ, ಮುತಾಲಿಕ್ ನ್ನು ಬಂಧಿಸ್ತಾರೆ. ಏನು ದ್ರೋಹ ಮಾಡಿದ್ರು ಮುತಾಲಿಕ್ ಎಂದು ತಿಮರೋಡಿ ಪ್ರಶ್ನಿಸಿದರು.
ಹಾಗೇ ಒಂದು ಕೋಟಿ ಪರಿಹಾರ ಕೊಡಿ ಅಂದ್ರೆ, 50 ಪರ್ಸೆಂಟ್ ನುಂಗಿ 50 ಲಕ್ಷ ಪರಿಹಾರ ಕೊಡ್ತಾರೆ. ನಳಿನ್ ಕುಮಾರ್ ವಾಹನ ಅಡ್ಡಗಟ್ಟಿದ್ದಲ್ಲ ತಲೆ ಒಡೆಯಬೇಕಿತ್ತು. ಎಲ್ಲರಿಗೂ ಭದ್ರತೆ ಆಗಲ್ಲ ಎಂದಿರುವ ತೇಜಸ್ವಿ ಸೂರ್ಯ ಯಾಕೆ ಪ್ರವೀಣ್ ಮನೆಗೆ ಬರ್ಬೇಕು ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕಿದರು.