Sunday, June 7, 2026
Homeತಾಜಾ ಸುದ್ದಿಜ್ಞಾನವ್ಯಾಪಿ ಪ್ರಕರಣ: ಮಸೀದಿ ಪರ ವಾದಿಸುತ್ತಿದ್ದ ವಕೀಲರ ನಿಧನ

ಜ್ಞಾನವ್ಯಾಪಿ ಪ್ರಕರಣ: ಮಸೀದಿ ಪರ ವಾದಿಸುತ್ತಿದ್ದ ವಕೀಲರ ನಿಧನ

- Advertisement -
- Advertisement -

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯ ಪರ ವಾದ ಮಾಡುತ್ತಿದ್ದ ವಕೀಲ ಅಭಯ್‍ನಾಥ್ ಯಾದವ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

62 ವರ್ಷದ ಅಭಯ್‍ನಾಥ್ ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು ಇಂದು ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅಲಹದಾಬಾದ್ ಹೈಕೋರ್ಟ್ ಕಳೆದ ವಾರ ಪ್ರಕರಣದ ವಿಚಾರಣೆ ನಡೆಸಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 3ರಂದು ನಿಗದಿ ಮಾಡಿದೆ. ನಾಡಿದ್ದು ಪ್ರಕರಣದ ವಿಚಾರಣೆಗೆ ಬರುವ ಸಂದರ್ಭದಲ್ಲಿ ವಕೀಲರು ನಿಧನರಾಗಿದ್ದಾರೆ.

- Advertisement -

Latest News

error: Content is protected !!