- Advertisement -
- Advertisement -
ಕುಂದಾಪುರ: ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಚಿನ್ನಾಭರಣವನ್ನು ದೋಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರವೀಣ್( 24 ) ಬಂಧಿತ ಆರೋಪಿ.
ಕಳೆದ ಆ.5 ರಂದು ಕೊರ್ಗಿ ಗ್ರಾಮದ ಕಾಡಿನಬೆಟ್ಟು ಬಳಿ ಕಳ್ಳತನ ನಡೆದಿತ್ತು. ಆರೋಪಿ ರಸ್ತೆ ಬದಿ ನಿಂತಿದ್ದ ದೇವಕಿ ಪೂಜಾರ್ತಿ ಎಂಬುವವರ ಮೇಲೆ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಸರ ದೋಚಿದ್ದ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನ ಬಂಧಿಸಲಾಗಿದೆ.
- Advertisement -