ಸುಳ್ಯ: ಕೆಎಸ್ ಅರ್ ಟಿಸಿ ಬಸ್ನಲ್ಲಿ ಬೆಳ್ಳಾರೆಯ ಯುವಕ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಯ ಅವ್ಯವಸ್ಥೆ ಯಿಂದಾಗಿ ಬಸ್ಸು ಒಮ್ಮಿಂದೊಮ್ಮೆಲೆ ಗುಂಡಿಗೆ ಬಿದ್ದು ಎದ್ದಾಗ ಹಿಂಬದಿ ಸೀಟಿನಲ್ಲಿದ್ದ ಯುವಕ ಸೀಟಿನಿಂದ ಎಸೆಯಲ್ಪಟ್ಟು, ಸೊಂಟಕ್ಕೆ ಏಟು ತಗುಲಿ ಗಂಭೀರಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಬೆಳ್ಳಾರೆಯ ತಡೆಗಜೆ ವಿಜಯ ಕುಮಾರ್ ಎಂಬವರು ಸುಳ್ಯದ ಮೊಬೈಲ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದು,ಆ.17ರಂದು ಕಾರ್ಯ ನಿಮಿತ್ತ ಮಂಗಳೂರಿಗೆ ಹೋಗಿ ವಾಪಾಸ್ ಬೆಳ್ಳಾರೆಗೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಬರುತ್ತಿದ್ದರು.ಬಸ್ ಕಲ್ಲಡ್ಕ ಬಳಿ ತಲುಪುತ್ತಿದ್ದಂತೆ ಬಸ್ಸು ಒಮ್ಮಿಂದೊಮ್ಮೆಲೆ ರಸ್ತೆಯಲ್ಲಿದ್ದ ಹೊಂಡಕ್ಕೆ ಬಿದ್ದೇಳಿತ್ತೆನ್ನಲಾಗಿದೆ.
ಬಸ್ ಗುಂಡಿಗೆ ಬಿದ್ದ ರಭಸಕ್ಕೆ ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವಿಜಯ ಕುಮಾರ್ ರವರು ಸೀಟಿನಿಂದ ಮೇಲಕ್ಕೆ ಎಸೆಯಲ್ಪಟ್ಟು ಬೀಳುವಾಗ ಬಸ್ಸಿನ ಸೀಟಿನ ರಾಡ್ ಸೊಂಟಕ್ಕೆ ತಾಗಿ ಗಂಭೀರ ಗಾಯಗೊಂಡರಲ್ಲದೆ,ಸೊಂಟದಿಂದ ಕೆಳಭಾಗ ಸ್ಪರ್ಶ ಕಳೆದುಕೊಂಡು,ಬಸ್ಸಿನೊಳಗೆ ಬೊಬ್ಬೆ ಹೊಡೆದರೆನ್ನಲಾಗಿದೆ. ತಕ್ಷಣ ಬಸ್ಸು ನಿಲ್ಲಿಸಿದ ಚಾಲಕ ಗಂಭೀರ ಸ್ಥಿತಿಯಲ್ಲಿದ್ದ ವಿಜಯರವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮೇಲಕ್ಕೆಸೆಯಲ್ಪಟ್ಟ ಸಂದರ್ಭ ವಿಜಯರವರ ತಲೆ ಬಸ್ಸಿನ ಟಾಪ್ ಗೆ ತಾಗಿತ್ತೆನ್ನಲಾಗಿದೆ.ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಬೆನ್ನುಹುರಿ ಹಾಗೂ ಕುತ್ತಿಗೆ ಸಮೀಪದ ಎಲುಬು ಜಖಂಗೊಂಡಿರುವುದಾಗಿಯೂ
ರಸ್ತೆಯ ಅಭಿವೃದ್ಧಿ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು, ರಸ್ತೆಯಲ್ಲಿ ಸಮರ್ಪಕ ಕಾಮಗಾರಿಯ ನಿರ್ವಹಣೆ ಇಲ್ಲದೇ ಇರುವುದು ಹಾಗೂ ಬಸ್ಸು ಚಾಲಕನ ನಿರ್ಲಕ್ಷ್ಯ ತನದ ಚಾಲನೆಯೇ ಘಟನೆಗೆ ಕಾರಣವೆನ್ನಲಾಗಿದ್ದು, ಬಸ್ ಚಾಲಕನ ಅಬ್ದುಲ್ ಎಂಬವರ ಮೇಲೆ ಬಂಟ್ವಾಳ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯರವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ತಗಡಜೆಯಲ್ಲಿ ವಾಸಿಸುತ್ತಿದ್ದಾರೆ. ವಿಜಯರವರ ದುಡಿಮೆಯಿಂದಾಗಿ ಕುಟುಂಬದ ಜೀವನ ಸಾಗುತ್ತಿತ್ತು. ಇದೀಗ ಕುಟುಂಬಸ್ಥರಿಗೆ ದಿಕ್ಕು ತೋಚದಂತಾಗಿದೆ.