ಕಾರವಾರ: ಖತರ್ನಾಕ್ ಕಳ್ಳರು ಬಸ್ ನಿಲ್ದಾಣವನ್ನೇ ಕಳ್ಳತನ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ತಿನೈಘಾಟ ಸಮೀಪದ ಪಿರೆಗಾಳಿಯಲ್ಲಿ ನಡೆದಿದೆ.
ಜೋಯಿಡಾ ತಾಲೂಕಿನ ಹಲವು ಕಡೆ ರುಡ್ ಸೆಟ್ ಸಂಸ್ಥೆಯವರು ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರು. ಅದರಂತೆ 3 ವರ್ಷದ ಹಿಂದೆ 2 ಲಕ್ಷ ರೂ. ವೆಚ್ಚದಲ್ಲಿ ಕಬ್ಬಿಣದ ಪೈಪ್ ಹಾಗೂ ಸ್ಟೀಲ್ ಕಂಬಿಗಳನ್ನು ಬಳಸಿ ತಿನೈಘಾಟ್ನ ಪಿರೆಗಾಳಿ ಗ್ರಾಮದಲ್ಲಿಯೂ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿತ್ತು.
ಆದರೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಾರಂಭವಾದ ಬಳಿಕ ಬಸ್ ನಿಲ್ದಾಣ ಮುಖ್ಯರಸ್ತೆಯಿಂದ ದೂರವಾಗಿತ್ತು. ಬಳಿಕ ಈ ನಿಲ್ದಾಣಕ್ಕೆ ಪ್ರಯಾಣಿಕರು ಬಂದು ನಿಲ್ಲುವುದು ಕಡಿಮೆಯಾಯಿತು. ಹೀಗಾಗಿ ಈ ಅವಕಾಶವನ್ನು ಬಳಸಿಕೊಂಡ ಕಳ್ಳರು ನಿಲ್ದಾಣದ ಕಬ್ಬಿಣದ ಪೈಪ್ ಸೇರಿ ನೆಲಕ್ಕೆ ಹಾಕಿದ ಟೈಲ್ಸ್ ಸಹ ಬಿಡದೇ ಇಡೀ ನಿಲ್ದಾಣವನ್ನು ಕದ್ದು ಪರಾರಿಯಾಗಿದ್ದಾರೆ. ಹೆದ್ದಾರಿಯಲ್ಲಿ ಸೇತುವೆ ನಿರ್ಮಾಣಕ್ಕೆ ಹಾಕಿದ ಕಬ್ಬಿಣವನ್ನು ಸಹ ಕಳ್ಳರು ಕದ್ದೊಯ್ದಿದ್ದಾರೆ.