- Advertisement -
- Advertisement -
ಮಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುರುಘಾ ಶ್ರೀಗಳನ್ನು ಈಗಾಗಲೇ ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಎಲ್ಲಾ ಕಾನೂನು ಪ್ರಕಾರವೇ ನಡೆಯುತ್ತಿದೆ. ಈಗ ನಾನು ಮಾತನಾಡುವುದು ಸರಿಯಲ್ಲ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಅವರು ಸರಿಯಾದ ರೀತಿಯಲ್ಲಿ ಅವರ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ವ್ಯಾಖ್ಯಾನ ಸರಿಯಲ್ಲ ಎಂದು ಹೇಳಿದ್ರು.
- Advertisement -