Tuesday, April 30, 2024
Homeಚಿಕ್ಕಮಗಳೂರುಗಣೇಶ ವಿಸರ್ಜನೆ ವೇಳೆ ದುರಂತ ; ವಿದ್ಯುತ್ ತಂತಿ ತಗುಲಿ ಮೂವರು ಸಾವು

ಗಣೇಶ ವಿಸರ್ಜನೆ ವೇಳೆ ದುರಂತ ; ವಿದ್ಯುತ್ ತಂತಿ ತಗುಲಿ ಮೂವರು ಸಾವು

spot_img
- Advertisement -
- Advertisement -

ಚಿಕ್ಕಮಗಳೂರು : ಗಣೇಶ ವಿಸರ್ಜನೆ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಿ.ಹೊಸಹಳ್ಳಿ ಗ್ರಾಮದಲ್ಲಿ ನಿನ್ನೆ ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್​​ನಲ್ಲಿದ್ದ ಪೆಂಡಾಲ್​​ಗೆ ವಿದ್ಯುತ್ ತಂತಿ ತಗುಲಿ ರಾಜು(47), ಪಾರ್ವತಿ(35), ರಚನಾ(28) ಮೃತಪಟ್ಟಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನಕ್ಕೆ ಶಿಫ್ಟ್​ ಮಾಡಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!