- Advertisement -
- Advertisement -
ಬೆಳ್ತಂಗಡಿ: ಕೊರೊನ ಕೋವಿಡ್-19 ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಭುಜಕ್ಕೆ ಭುಜ ಕೊಟ್ಟು ದುಡಿದ ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿ ನೀಡಿದ ಆದೇಶವನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಬಳಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿಕೊಂಡರು.
ಕೇವಲ ಕೊರೊನ ಸಂದರ್ಭದಲ್ಲಿ ಮಾತ್ರ ಅಲ್ಲ, ಬಂದೋಬಸ್ತ್, ಸಂಚಾರ ನಿಯಂತ್ರಣ, ಅತಿವೃಷ್ಟಿ ಹೀಗೆ ಪ್ರತಿ ವಿಪತ್ತಿನ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಜೊತೆ ಕೆಲಸ ಮಾಡಿರುವ ಗೃಹರಕ್ಷಕ ಇಲಾಖೆಯ ಸಿಬ್ಬಂದಿಯನ್ನು ಆಯಾಯ ಇಲಾಖೆಗಳಲ್ಲಿಯೇ ಮುಂದುವರಿಸಬೇಕು ಎಂದು ಶಾಸಕ ಹರೀಶ್ ಪೂಂಜಾ ಮನವಿ ಮಾಡಿದ್ದಾರೆ.
- Advertisement -