Sunday, May 19, 2024
Homeತಾಜಾ ಸುದ್ದಿನಿಧಿಯ ಆಸೆಗೆ ಬೆರಳು ಹಾಗೂ 5 ಲಕ್ಷ ರೂಪಾಯಿ ಎರಡನ್ನೂ ಕಳೆದುಕೊಂಡ ಮಹಿಳೆ

ನಿಧಿಯ ಆಸೆಗೆ ಬೆರಳು ಹಾಗೂ 5 ಲಕ್ಷ ರೂಪಾಯಿ ಎರಡನ್ನೂ ಕಳೆದುಕೊಂಡ ಮಹಿಳೆ

spot_img
- Advertisement -
- Advertisement -

ಹಾಸನ: ನಿಧಿಯ ಆಸೆಗಾಗಿ ಮಹಿಳೆಯೊಬ್ಬರು 5 ಲಕ್ಷ ರೂಪಾಯಿ ಹಾಗೂ ಬೆರಳು ಎರಡನ್ನೂ ಕಳೆದುಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಹಾಸನ ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಮಂಜೇಗೌಡ-ಲೀಲಾವತಿಗೆ ಕಳ್ಳ ಸ್ವಾಮೀಜಿ ಮಂಜೇಗೌಡ ಎಂಬಾತ ನಿಮ್ಮ ಜಮೀನಿನಲ್ಲಿ ನಿಧಿ ಇದೆ. ನನ್ನಲ್ಲಿರುವ ದೈವೀ ಶಕ್ತಿಯಿಂದ ಅದನ್ನು ಹೊರ ತೆಗೆಯುತ್ತೇನೆ ಎಂದು ನಂಬಿಸಿದ್ದಾನೆ. ಇದಕ್ಕೂ ಮುನ್ನ ಕಿಲಾಡಿ ಸ್ವಾಮೀಜಿ ಮಂಜೇಗೌಡರ ಹೊಲದಲ್ಲಿ ಚಿನ್ನ ಲೇಪಿತ ಮೂರು ಕೆಜಿ ಬೆಳ್ಳಿ ವಿಗ್ರಹ ಹೂತಿಟ್ಟಿದ್ದಾನೆ.

ನಂತರ ರಾತ್ರಿ ವೇಳೆ ಜಮೀನಿಗೆ ಮಂಜೇಗೌಡ-ಲೀಲಾವತಿ ಕರೆದೊಯ್ದು ಮೊದಲು ಪೂಜೆ ಮಾಡಿ, ಜಮೀನಿನಲ್ಲಿ ಹೂತಿಟ್ಟಿದ್ದ ಚಿನ್ನ ಲೇಪಿತ ವಿಗ್ರಹ ಹೊರತೆಗೆದು ತೊಳೆದು ದಂಪತಿಗೆ ನೀಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಮಂಜೇಗೌಡ ಚಿನ್ನದ ವಿಗ್ರಹಕ್ಕೆ ರಕ್ತ ಅಭಿಷೇಕ ಮಾಡಬೇಕು ಎಂದು ಲೀಲಾವತಿಯ ಬೆರಳನ್ನೇ ಕೊಯ್ದಿದ್ದಾನೆ. ಬೆರಳು ಕೊಯ್ದ ರಭಸಕ್ಕೆ ಮಹಿಳೆಯ ಕೈ ಬೆರಳಿನ ನರವೇ ಕತ್ತರಿಸಿ ಹೋಗಿದೆ.

ಒಂದು ವಾರದ ನಂತರ ಮಂಜೇಗೌಡ-ಲೀಲಾವತಿ ಜ್ಯುವೆಲರಿ ಶಾಪ್‌ಗೆ ತೆರಳಿ ವಿಗ್ರಹ ಪರಿಶೀಲಿಸಿದಾಗ ಬೆಳ್ಳಿ ವಿಗ್ರಹ ಎಂಬುದು ಪತ್ತೆಯಾಗಿದೆ. ಇತ್ತ ಕಳ್ಳ ಸ್ವಾಮೀಜಿ ಮಂಜೇಗೌಡ ದಂಪತಿಗೆ ವಂಚಿಸಿ ಫೋನ್ ಸ್ವಿಚ್ಡ್‌ ಆಫ್ ಮಾಡಿಕೊಂಡು ಹಣದ ಸಮೇತ ಎಸ್ಕೇಪ್ ಆಗಿದ್ದಾನೆ. ಇತ್ತ ಗಾಯಗೊಂಡಿದ್ದ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗಿದ್ದಾರೆ. ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದುವರೆಗೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ

- Advertisement -
spot_img

Latest News

error: Content is protected !!