Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ: ಮಹಾಕವಿ ಪಂಪನ ಹೆಸರಿನ ರಸ್ತೆಗೆ ಮರುನಾಮಕರಣ: ಬಿಜೆಪಿಯಿಂದ ಜೈನ ಸಮುದಾಯಕ್ಕೆ ಸರಣಿ ಅಪಮಾನ: ರಕ್ಷಿತ್...

ಬೆಳ್ತಂಗಡಿ: ಮಹಾಕವಿ ಪಂಪನ ಹೆಸರಿನ ರಸ್ತೆಗೆ ಮರುನಾಮಕರಣ: ಬಿಜೆಪಿಯಿಂದ ಜೈನ ಸಮುದಾಯಕ್ಕೆ ಸರಣಿ ಅಪಮಾನ: ರಕ್ಷಿತ್ ಶಿವರಾಂ

- Advertisement -
- Advertisement -

ಬೆಳ್ತಂಗಡಿ: ಆದಿ ಕವಿ ಪಂಪನ ರಸ್ತೆಗೆ ಮರುನಾಮಕರಣ ಮಾಡ್ತಿರೋ ಮೂಲಕ ಕರ್ನಾಟಕ ಸಾಹಿತ್ಯ ಲೋಕಕ್ಕೆ ಜೈನ ಪರಂಪರೆ ನೀಡಿರುವ ಕೊಡುಗೆಗೆ ಬಿಜೆಪಿ ಸರಣಿ ಅವಮಾನ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಿಡಿಕಾರಿದ್ದಾರೆ.

ಮನುಜ ಜಾತಿ ತಾನೊಂದೆ ವಲಂ ಎಂದು ವಿಶ್ವ ಮಾನವ ಸಂದೇಶ ಸಾರಿದ ಆದಿಕವಿ ಪಂಪನ ಹೆಸರಿನ ರಸ್ತೆಗೆ ಬಿಜೆಪಿ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರ ಮೂಲಕ ಮರು ನಾಮಕರಣ ಮಾಡುತ್ತಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಮಹಾಕವಿ ಪಂಪನ ಹೆಸರಿನ ರಸ್ತೆಗೆ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಬದಲಾಯಿಸಲು ಕಸಾಪ ಅಧ್ಯಕ್ಷರು ಹಾಗೂ ಬಿಜೆಪಿ ಸರ್ಕಾರ ಮುಂದಾಗಿದೆ. ಈಗಾಗಲೇ ಸರ್ಕಾರಕ್ಕೆ ಸಾಹಿತ್ಯ ಪರಿಷತ್ ಪ್ರಸ್ತಾವನೆ ಸಲ್ಲಿಸಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಒಪ್ಪಿಗೆ ಕೂಡ ಸೂಚಿಸಿದ್ದಾರೆ. ಕನ್ನಡ ಸಾಹಿತ್ಯ ಸಾರಸತ್ವ ಲೋಕಕ್ಕೆ ಅಮೂಲಾಗ್ರ ಕೊಡುಗೆ ನೀಡಿರುವ ಆದಿಕವಿ, ಮಹಾಕವಿ ಪಂಪನ ಹೆಸರಿನ ರಸ್ತೆಗೆ ಮರುನಾಮಕರಣ ಮಾಡುತ್ತಿರುವುದು ನಿಜಕ್ಕೂ ಖೇದಕರ ಎಂದು ರಕ್ಷಿತ್‌ ಶಿವರಾಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ನಿರಂತರವಾಗಿ ಜೈನ ಸಮುದಾಯಕ್ಕೆ ಅಪಮಾನಗಳನ್ನ ಮಾಡುತ್ತಲೇ ಬಂದಿದ್ದಾರೆ. ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಅವಮಾನಗಳನ್ನ ಮಾಡಲಾಗಿದೆ.‌ ಜೈನ  ಧರ್ಮದ ಸ್ಥಾಪಕರನ್ನ ಏಕ ವಚನದಲ್ಲಿ ಸಂಭೋದಿಸಲಾಗಿದೆ. ಪಠ್ಯ ಪುಸ್ತಕದಿಂದಲೇ ಜೈನ ಸಮುದಾಯದವರ ಮಾಹಿತಿಗಳಿಗೂ ಕೊಕ್ಕೆ ಹಾಕಲಾಯಿತು. ಇಂತಹ ಅವಮಾನಗಳನ್ನ ಬಿಜೆಪಿ ಸರ್ಕಾರ ನಿರಂತರವಾಗಿ ನಡೆಸುತ್ತಲೇ ಬಂದಿದೆ ಎಂದು ರಕ್ಷಿತ್‌ ಶಿವರಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!