- Advertisement -
- Advertisement -
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿಗೊಳಿಸಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಈ ಪಿಐಎಲ್ ಸಲ್ಲಿಸಲಾಗಿತ್ತು.
ಸಮಾನತೆ, ಭ್ರಾತೃತ್ವ ಮತ್ತು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸಲು ಡ್ರೆಸ್ ಕೋಡ್ ಜಾರಿಗೊಳಿಸಬೇಕು ಎಂದು ಪಿಐಎಲ್ನಲ್ಲಿ ವಾದಿಸಲಾಗಿದೆ. ಅರ್ಜಿದಾರ ನಿಖಿಲ್ ಉಪಾಧ್ಯಾಯ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದೊಂದು ಸಾಂವಿಧಾನಿಕ ಸಮಸ್ಯೆಯಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದ್ದರು. ಆದರೆ ಪಿಐಎಲ್ ಅನ್ನು ವಿಚಾರಣೆಗೆ ಸ್ವೀಕರಿಸಲು ನ್ಯಾಯಪೀಠ ಒಪ್ಪದ ಕಾರಣ ಆರ್ಜಿದಾರರು ಅರ್ಜಿಯನ್ನು ಹಿಂಪಡೆದರು.
- Advertisement -