Thursday, June 4, 2026
HomeUncategorizedವಿಟ್ಲ; ದೂರವಾಣಿ ಕೇಬಲ್ ಕದಿಯಲು ಬಂದು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಇಬ್ಬರು

ವಿಟ್ಲ; ದೂರವಾಣಿ ಕೇಬಲ್ ಕದಿಯಲು ಬಂದು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಇಬ್ಬರು

- Advertisement -
- Advertisement -

ವಿಟ್ಲ; ದೂರವಾಣಿ ಕೇಬಲ್ ಕದಿಯಲು ಬಂದು ಇಬ್ಬರು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಘಟನೆ ಕೊಳ್ನಾಡು ಗ್ರಾಮದ ಕುದ್ರಿಯ ಎಂಬಲ್ಲಿ ನಡೆದಿದೆ.

 ಪುಣಚ ನಿವಾಸಿ ಸೇಸಪ್ಪ ಹಾಗೂ ಅವರೊಂದಿಗೆ ಬಂದಿದ್ದ ಇನ್ನೋರ್ವ ವ್ಯಕ್ತಿ ಕುದ್ರಿಯಾ ಸಮೀಪ ಕೇಬಲ್ ಕದಿಯುತ್ತಿದ್ದ ವೇಳೆ ನಾಗರಿಕರ ಕೈಗೆ ಸಿಕ್ಕಿ ಬಿದ್ದಿದಾರೆ.  ಆ ಬಳಿಕ ಅವರಿಬ್ಬರನ್ನು ಸಾರ್ವಜನಿಕರು ವಿಟ್ಲ ಠಾಣಾ ಪೊಲೀಸರಿಗೊಪ್ಪಿಸಿದ್ದಾರೆ.‌ ಸೇಸಪ್ಪರವರು ಈ ಹಿಂದೆ ದಿನಗೂಲಿ ನೆಲೆಯಲ್ಲಿ ಬಿಎಸ್ಎನ್ಎಲ್ ನಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಕೆಲ ಸಮಯಗಳ ಹಿಂದೆ ಅವರನ್ನು ಕೆಲಸದಿಂದ ಬಿಟ್ಟಿದ್ದರೆನ್ನಲಾಗಿದೆ.
ಇದೀಗ ಇಬ್ಬರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ದೂರವಾಣಿ ಕೇಬಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಸಾರ್ವಜನಿಕರು ಹಿಡಿದು ನಮಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವಿಟ್ಲ ಠಾಣಾ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!