- Advertisement -
- Advertisement -
ಗಂಗೊಳ್ಳಿ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರನ್ನು ಆಹಾರ ನಿರೀಕ್ಷಕರ ತಂಡ ಸೆ.19ರಂದು ಬೆಳಗ್ಗೆ ತ್ರಾಸಿ ಗ್ರಾಮದ ಮೋವಾಡಿ ಗಾಣದಮಕ್ಕಿ ಕ್ರಾಸ್ ಬಳಿ ಬಂಧಿಸಿದೆ.
ಕೋಡಿಯ ಅಶ್ರಫ್ ಬ್ಯಾರಿ ಹಾಗೂ ರಜಬ್ ಬಂಧಿತರು. ಬಂಧಿತರಿದಂದ 15,400 ರೂ. ಮೌಲ್ಯದ ಒಟ್ಟು 14 ಚೀಲಗಳಲ್ಲಿ ತುಂಬಿದ್ದ 700 ಕೆ.ಜಿ ಬೆಳ್ತಿಗೆ ಅಕ್ಕಿ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -