- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧೆಡೆ ದಾಳಿ ನಡೆಸಿರುವ ಪೊಲೀಸರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಉಳ್ಳಾಲ, ಸುರತ್ಕಲ್, ಪುತ್ತೂರು, ಬಜ್ಪೆ ಹಾಗೂ ಕಾವೂರಿನಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪಿಎಫ್ ಐ ದ.ಕ. ಜಿಲ್ಲಾಧ್ಯಕ್ಷ ಇಜಾಜ್ ಅಹಮದ್, ಫಿರೋಜ್ ಖಾನ್, ನೌಫಲ್, ಮುಜಾವರ್ ಮತ್ತು ರಾಜಿಕ್ ಸೇರಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.
ವಶಕ್ಕೆ ಪಡೆಯಲ್ಪಟ್ಟಿರುವ ಪಿಎಫ್ ಐ ಮುಖಂಡರನ್ನು ಆಯಾ ಠಾಣೆಗಳ ವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿರುವ ಪೊಲೀಸರು, ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಕರೆತಂದು ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -