- Advertisement -
- Advertisement -
ಬೆಳ್ತಂಗಡಿಗೆ; ವ್ಯಕ್ತಿಯೊಬ್ಬರು ಬೆಳ್ತಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮ ಸಂಬೋಳ್ಯ ಎಂಬಲ್ಲಿ ನಡೆದಿದೆ.
ಶೇಖರ್ ಶೆಟ್ಟಿಗಾರ್ (53) ನಾಪತ್ತೆಯಾದವರು. ಶೇಖರ್ ಶೆಟ್ಟಿಗಾರ ಅವರು ದಿನಾಂಕ;21-09-2022 ರಂದು ಬೆಳಿಗ್ಗೆ 09.00 ಗಂಟೆಗೆ ಬೆಳ್ತಂಗಡಿ ಕಡೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವರು ಸಂಜೆಯದರೂ ಮನೆಗೆ ಬಂದಿಲ್ಲ. ಹೀಗಾಗಿ ಸಂಬಂಧಿಕರಲ್ಲಿ ಹಾಗೂ ನೆರೆಹೊರೆಯವರಲ್ಲಿ ಮನೆಯವರು ವಿಚಾರಿಸಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಿರುವುದಿಲ್ಲ.
ಈ ಮೊದಲು ಕೂಡಾ ಅವರು ಮನೆಯಿಂದ ಹೋದವರು 2-3 ದಿನಗಳ ನಂತರ ಮನೆಗೆ ಬರುತ್ತಿದ್ದು ಅದೇ ರೀತಿಯಾಗಿ ಮನೆಗೆ ಬರಬಹುದೆಂಬ ನಿರೀಕ್ಷೆಯಲ್ಲಿದ್ದರು. ಆದರೆ ನಿನ್ನೆಯವರೆಗೆ ಮನೆಗೆ ಬಾರದೇ ಇರುವುದರಿಂದ ಅವರ ಪುತ್ರ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Advertisement -