Friday, June 27, 2025
Homeಚಿಕ್ಕಮಗಳೂರುಆರ್‌ಎಸ್‌ಎಸ್‌ ಕಾರ್ಯಕರ್ತನ ಕಾರ್ ಮೇಲೆ ಬೆದರಿಕೆ ಸಂದೇಶದ ಬರಹ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರ ಬಂಧನ

ಆರ್‌ಎಸ್‌ಎಸ್‌ ಕಾರ್ಯಕರ್ತನ ಕಾರ್ ಮೇಲೆ ಬೆದರಿಕೆ ಸಂದೇಶದ ಬರಹ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರ ಬಂಧನ

spot_img
- Advertisement -
- Advertisement -

ಚಿಕ್ಕಮಗಳೂರು: ಆರ್ ಎಸ್ ಎಸ್ ಮುಖಂಡರಾದ ಡಾ. ಶಶಿಧರ ಚಿಂದಿಗೆರೆ ಜಯಣ್ಣ ಅವರ ಕಾರಿನ ಮೇಲೆ ಕೊಲೆ ಬೆದರಿಕೆ ಸಂದೇಶ ಬರೆದ ಪ್ರಕರಣ ಸಂಬಂಧ ಕಡೂರು ಪೊಲೀಸರು ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ.

ಐಪಿಸಿ 427, 505 (2), 506 ರಡಿ ಪ್ರಕರಣ ದಾಖಲಿಸಲಾಗಿದೆ.

ಕಡೂರಿನ ಲಕ್ಷ್ಮೀಶ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಕೆಲ ದುಷ್ಕರ್ಮಿಗಳು ಕೊಲೆ ಬೆದರಿಕೆ ಸಂದೇಶ ಬರೆದು ಕೆಲ ಅಶ್ಲೀಲ ಪದಗಳನ್ನು ಬರೆದಿದ್ದಾರೆ.

ಜೊತೆಗೆ ಜಿಹಾದ್​​ ಎಂದು ಬರೆಯಲಾಗಿದ್ದು, ಕಾರಿನ ನಾಲ್ಕೂ ಚಕ್ರದ ಗಾಳಿಯನ್ನು ತೆಗೆದಿದ್ದಾರೆ. ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಡಾ ಶಶಿಧರ್, ಚಿಕ್ಕಮಗಳೂರು ಜಿಲ್ಲೆಯ ಆರ್​ಎಸ್​ಎಸ್​ ಧರ್ಮ ಜಾಗರಣ ಗತಿವಿಧಿ ಸಮಿತಿಯ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

- Advertisement -
spot_img

Latest News

error: Content is protected !!