- Advertisement -
- Advertisement -
ಚಿಕ್ಕಮಗಳೂರು:ಇಲ್ಲಿನ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ.ಚಾಲಕನಿಗೆ ಸರಿಯಾಗಿ ರಸ್ತೆ ಮಾರ್ಗ ಕಾಣದೇ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ಕಾರಿನಲ್ಲಿದ್ದ ಐವರೂ ಕಂದಕದಲ್ಲಿ ಸಿಲುಕಿದ್ದು,ಗಾಯಗೊಂಡಿದ್ದರು. ಇವರನ್ನು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದ್ದು ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಎಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ . ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -