- Advertisement -
- Advertisement -
ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶರಣರನ್ನು ಬಂಧಿಸಲಾಗಿದೆ. ಈ ಮಧ್ಯೆ
ಅನಾರೋಗ್ಯದ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಶ್ರೀಗಳನ್ನು ಐಸಿಯು ವಾರ್ಡ್ಗೆ ಶಿಫ್ಟ್ ಮಾಡಿ, ಮತ್ತಷ್ಟು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಆರಂಭವಾಗಿತ್ತು. ಆದರೀಗ ಇವೆಲ್ಲದರ ನಡುವೆ ಮುರುಘಾ ಸ್ವಾಮೀಜಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕೂಡಲೇ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರಾಗಬೇಕಿದೆ.
ಕೋರ್ಟ್ ಕೂಡಲೇ ಆರೋಪಿಯನ್ನು ಕರೆತನ್ನಿ ಇಲ್ಲವೇ ವೈದ್ಯಕೀಯ ವರದಿ ನೀಡುವಂತೆ ಸೂಚಿಸಿದ್ದಾರೆ. ಇನ್ನು ಪೊಲೀಸರು ವರದಿಯನ್ನು ಸಲ್ಲಿಸಿದರಾದರೂ, ಖುದ್ದು ಸ್ವಾಮೀಜಿಯನ್ನೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಈ ಕಾರಣದಿಂದಲೇ ಬೆಂಗಳೂರಿಗೆ ಶಿಫ್ಟ್ ಆಗಲು ಸಜ್ಜಾಗಿದ್ದ ಸ್ವಾಮೀಜಿ ಕೋರ್ಟ್ಗೆ ತೆರಳಬೇಕಾಗಿದೆ.
- Advertisement -