Saturday, May 18, 2024
Homeತಾಜಾ ಸುದ್ದಿಬೆಂಗಳೂರು ಆಸ್ಪತ್ರೆಗೆ ಶಿಫ್ಟ್‌ ಆಗಲು ಸಜ್ಜಾಗಿದ್ದ ಮುರುಘಾ ಶ್ರೀಗಳಿಗೆ ಬಿಗ್ ಶಾಕ್: ಕೂಡಲೇ ಕೋರ್ಟ್​ಗೆ ಹಾಜರಾಗುವಂತೆ...

ಬೆಂಗಳೂರು ಆಸ್ಪತ್ರೆಗೆ ಶಿಫ್ಟ್‌ ಆಗಲು ಸಜ್ಜಾಗಿದ್ದ ಮುರುಘಾ ಶ್ರೀಗಳಿಗೆ ಬಿಗ್ ಶಾಕ್: ಕೂಡಲೇ ಕೋರ್ಟ್​ಗೆ ಹಾಜರಾಗುವಂತೆ ಸೂಚನೆ

spot_img
- Advertisement -
- Advertisement -

ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶರಣರನ್ನು ಬಂಧಿಸಲಾಗಿದೆ. ಈ ಮಧ್ಯೆ

ಅನಾರೋಗ್ಯದ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಶ್ರೀಗಳನ್ನು ಐಸಿಯು ವಾರ್ಡ್​ಗೆ ಶಿಫ್ಟ್​ ಮಾಡಿ, ಮತ್ತಷ್ಟು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಆರಂಭವಾಗಿತ್ತು. ಆದರೀಗ ಇವೆಲ್ಲದರ ನಡುವೆ ಮುರುಘಾ ಸ್ವಾಮೀಜಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕೂಡಲೇ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಹಾಜರಾಗಬೇಕಿದೆ.

ಕೋರ್ಟ್​ ಕೂಡಲೇ ಆರೋಪಿಯನ್ನು ಕರೆತನ್ನಿ ಇಲ್ಲವೇ ವೈದ್ಯಕೀಯ ವರದಿ ನೀಡುವಂತೆ ಸೂಚಿಸಿದ್ದಾರೆ. ಇನ್ನು ಪೊಲೀಸರು ವರದಿಯನ್ನು ಸಲ್ಲಿಸಿದರಾದರೂ, ಖುದ್ದು ಸ್ವಾಮೀಜಿಯನ್ನೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಈ ಕಾರಣದಿಂದಲೇ ಬೆಂಗಳೂರಿಗೆ ಶಿಫ್ಟ್​ ಆಗಲು ಸಜ್ಜಾಗಿದ್ದ ಸ್ವಾಮೀಜಿ ಕೋರ್ಟ್​ಗೆ ತೆರಳಬೇಕಾಗಿದೆ.

- Advertisement -
spot_img

Latest News

error: Content is protected !!