Sunday, May 19, 2024
Homeಕರಾವಳಿಬೆಳ್ತಂಗಡಿ: ದುಷ್ಕರ್ಮಿಗಳ ತಂಡದಿಂದ ಮಸೀದಿಗೆ ಬಿಯರ್ ಬಾಟಲಿ ಎಸೆತ..!

ಬೆಳ್ತಂಗಡಿ: ದುಷ್ಕರ್ಮಿಗಳ ತಂಡದಿಂದ ಮಸೀದಿಗೆ ಬಿಯರ್ ಬಾಟಲಿ ಎಸೆತ..!

spot_img
- Advertisement -
- Advertisement -

ಬೆಳ್ತಂಗಡಿ : ದುಷ್ಕರ್ಮಿಗಳ ತಂಡವೊಂದು ಮಸೀದಿಗೆ ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುರ ಜುಮ್ಮಾ ಮಸೀದಿಯಲ್ಲಿ ನಡೆದಿದೆ .

ದುಷ್ಕರ್ಮಿಗಳು ಮಸೀದಿಯ ಆವರಣದೊಳಗೆ ಬಿಯರ್ ಬಾಟ್ಲಿ ಎಸೆದಿದ್ದಾರೆ ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೇ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಮಸೀದಿಗೆ ಬಿಯರ್ ಬಾಟಲಿ ಎಸೆದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಸೀದಿಯೊಳಗೆ ಬಿಯರ್ ಬಾಟ್ಲಿ ಎಸೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ
ಕೃತ್ಯ ಎಸಗಿದವರ ಬಗ್ಗೆ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ

- Advertisement -
spot_img

Latest News

error: Content is protected !!