- Advertisement -
- Advertisement -
ಬಂಟ್ವಾಳ: ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿನ ರೈಲು ಹಳಿಯಲ್ಲಿ ಕಾಣೆಯಾಗಿದ್ದ ಯುವಕನೋರ್ವನ ಮೃತದೇಹ ಛಿದ್ರವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗುರುವಾರ ಸಂಜೆ ಮನೆಯಿಂದ ಹೋರಾಟ ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಪುತ್ರ ಕಾರ್ತಿಕ್ (25) , ರಾತ್ರಿ 11 ಗಂಟೆಯಾದರೂ ಮನೆಗೆ ಬಾರದ ಇದ್ದುದ್ದನ್ನು ಕಂಡು ಹುಡುಕಾಟ ಆರಂಭಿಸಿದ್ದರು.
ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಕಾರ್ತಿಕ್ ನ ಮೃತದೇಹ ದೇವಂದಬೆಟ್ಟು ಎಂಬಲ್ಲಿನ ರೈಲು ಹಳಿಯಲ್ಲಿ ಪತ್ತೆಯಾಳಗಿದ್ದು ರೈಲು ಹರಿದು ಮೃತದೇಹ ಛಿದ್ರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
- Advertisement -