- Advertisement -
![]()
- Advertisement -
ಬೈಂದೂರು: ಬೈಂದೂರು ತಾಲೂಕಿನ ಒತ್ತಿನಣೆ ಕಾಡಲ್ಲಿ ಕಾರು ಮತ್ತು ವ್ಯಕ್ತಿಯ ಶವವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಟ್ಟು ಕರಕಲಾದ ಕಾರಿನಲ್ಲಿ ಓರ್ವ ವ್ಯಕ್ತಿಯ ಅಸ್ಥಿಪಂಜರ ಕಾಣಿಸುತ್ತಿದ್ಸು ಬೈಂದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕಾರು ಸುಟ್ಟು ಹೋಗಿ ದಿನಗಳೇ ಕಳೆದಿದ್ದು ಇದೊಂದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


