Monday, June 30, 2025
Homeಕರಾವಳಿಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದ ಕಾರು; ಐವರಿಗೆ ಗಾಯ!

ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದ ಕಾರು; ಐವರಿಗೆ ಗಾಯ!

spot_img
- Advertisement -
- Advertisement -

ಬಂಟ್ವಾಳ: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡ ಘಟನೆ ಮಂಗಳೂರು-ಬಿ.ಸಿ ರೋಡ್‌ ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ರಾಮಲ್‌ ಕಟ್ಟೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಮಂಹಳೂರು ನಿವಾಸಿಗಳಾದ ಶರತ್‌‌, ಶ್ರೀರಾಮ್‌‌, ಆನಂದಿತ್‌‌‌‌, ಶುಸಾನ್‌‌ ಹಾಗೂ ಶ್ರೀರಾಮ್‌ ಎಂದು ಗುರುತಿಸಲಾಗಿದೆ. ಕಿರುಚಿತ್ರವೊಂದರ ಶೂಟಿಂಗ್‌‌ ಸಲುವಾಗಿ ಈ ಐದು ಮಂದಿ ಬೆಳಗ್ಗೆ ಸ್ವಿಫ್ಟ್‌ ಕಾರಿನಲ್ಲಿ ಮಂಗಳೂರಿನಿಂದ ಪುತ್ತೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ರಾಮಲ್‌‌ ಕಟ್ಟೆ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಢಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಐವರು ಪ್ರಯಾಣಿಕರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!