- Advertisement -
- Advertisement -
ಬೈಂದೂರು: ಬಸ್ ಗೆ ಕಾರು ಡಿಕ್ಕಿಯಾಗಿದ್ದು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿರುವ ಘಟನೆ ಬೈಂದೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ
ನಾವುಂದದಲ್ಲಿ ಬಸ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಕುಂದಾಪುರದಿಂದ ಭಟ್ಕಳ ಕಡೆಗೆ ಕಾರು ಸಾಗುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಠಾಣೆ ಪಿ.ಎಸ್.ಐ ಭೇಟಿ ನೀಡಿದ್ದು ಬೈಂದೂರು ಠಾಣೆಯಲ್ಲಿ ದೂರು ದಾಖಲಾಗಿದೆ.
- Advertisement -